ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಆರ್.ಎಂ ಮಂಜುನಾಥಗೌಡ ಭೇಟಿ: ಸ್ಪಂದನ ಅವರ ನಿಧನಕ್ಕೆ ತೀವ್ರ ಸಂತಾಪ.

ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಇವರ ಪತ್ನಿ ಸ್ಪಂದನ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ. ಆರ್. ಎಂ. ಮಂಜುನಾಥಗೌಡ ಇವರು ಸ್ಪಂದನ ಇವರ ಚಿಕ್ಕಪ್ಪನವರಾದ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಸ್ಪಂದನ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಇನ್ನು ಸಾಕಷ್ಟು ವರ್ಷಗಳ ಕಾಲ ಬಾಳಿ ಬದುಕಬೇಕಾದ ಹೆಣ್ಣು ಮಗಳ ಅಕಾಲಿಕ ನಿಧನ ನಮಗೆ ತುಂಬಾ ನೋವು ತಂದಿತು ಎಂದು ತಿಳಿಸಿದ ಗೌಡರು ದು:ಖತಪ್ತ ಹರಿಪ್ರಸಾದ್ ಇವರನ್ನು ಸಂತೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶೆಟ್ಟಿ ಹಾಗೂ ಕೆಪಿಸಿಸಿ ರಾಜ್ಯ ಸಂಯೋಜಕರಾದ ಆರ್. ಮೋಹನ್ ಇದ್ದರು.

Related posts

ಎಲೆ ಮರೆಯ ಕಾಯಿಯಂತಹ ಸಾಧಕರನ್ನು ಗುರುತಿಸುವ ಕೆಲಸ ಪರಿಷತ್ತು ಮಾಡುತ್ತಿದೆ-ನಾಡೋಜ ಡಾ.ಮಹೇಶ ಜೋಶಿ

ದೇಶದ ಹೆಸರು ಭಾರತ ಎನ್ನುವುದು ಸರಿಯಾದ ನಿರ್ಧಾರ- ಶಾಸಕ ಅರಗ ಜ್ಞಾನೇಂದ್ರ.

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್