ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ 50ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.
ಒಂದು ಕೋಟಿ ರುದ್ರಪಠಣ ಅಭಿಯಾನ ಕೂಡ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದ್ದುದರಿಂದ ಎಲ್ಲಾ ಋತ್ವಿಜರು ಸಂಸದರಿಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಿ.ಎಸ್ ಅರುಣ್, ಎಸ್. ರುದ್ರೇಗೌಡ, ಎಸ್.ಎಸ್. ಜ್ಯೋತಿಪ್ರಕಾಶ್, ತೇಜಸ್ವಿನಿ ರಾಘವೇಂದ್ರ, ಎಸ್. ದತ್ತಾತ್ರಿ, ರಾಜೇಶ್ ಕಾಮತ್, ದಿವಾಕರ ಶೆಟ್ಟಿ, ಉಮಾಶಂಕರ್, ಅನಿತಾ ರವಿಶಂಕರ್, ಇ. ವಿಶ್ವಾಸ್, ಮಾಲತೇಶ್,ಕೆ.ವಿ. ಅಣ್ಣಪ್ಪ, ಸೇರಿದಂತೆ ಅಪಾರ ಅಭಿಮಾನಿಗಳು ಹಾಜರಿದ್ದು ಶುಭ ಹಾರೈಸಿದರು.