ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ. 20ರಿಂದ 26 ರವರೆಗೆ ಕುವೆಂಪು ವಿವಿ ಮಟ್ಟದ ಅಂತರ ಕಾಲೇಜು ಶಿಬಿರ.

ಶಿವಮೊಗ್ಗ: ಎಟಿಎನ್‍ಸಿ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ವಿವಿ ಮಟ್ಟದ ಅಂತರ ಕಾಲೇಜು ಶಿಬಿರ ಕಾಲೇಜಿನ ಚಂದನ ಸಭಾಂಗಣದಲ್ಲಿ ಆ. 20ರಿಂದ 26 ರವರೆಗೆ ಹಮ್ಮಿಕೊಳ್ಳಲಾಗಿದೆ.
ಆ.20ರಂದು ಸಂಜೆ 5 ಗಂಟೆಗೆ ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕುವೆಂಪು ವಿವಿ ಪ್ರಭಾರ ಕುಲಪತಿ ಡಾ. ಎಸ್. ವೆಂಕಟೇಶ್, ಶಾಸಕ ಎಸ್.ಎನ್. ಚನ್ನಬಸಪ್ಪಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.
21ರಿಂದ 26ರವರೆಗೆ ಪ್ರತಿದಿನ ಸಂಜೆ 3ರಿಂದ 5ರ ವರೆಗೆ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಮಾತನಾಡುವರು.
ಸಮಾರೋಪ ಸಮಾರಂಭ ಆ.26ರ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾ ನಾಯ್ಕ, ಡಿ.ಎಸ್. ಅರುಣ್, ಜಿಪಂ ಸಿಇಒ ಡಾ ಸ್ನೇಹಲ್ ಸುಧಾಕರ್ ಲೋಖಂಡೆ ಭಾಗವಹಿಸುವರು. ಸಮಾರೋಪ ಭಾಷಣವನ್ನು ಪ್ರಾಂತೀಯ ರಾ.ಸೇ.ಯೋ.ನ ನಿರ್ದೇಶಕ ಡಿ. ಕಾರ್ತಿಕೇಯನ್ ಮಾಡಲಿದ್ದಾರೆ.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಿಬಿರದ ನಿರ್ದೇಶಕ ಡಾ. ನಾಗರಾಜ ಪರಿಸರ ಹಾಗೂ ಪ್ರೊ. ಮಮತಾ ಕೋರಿದ್ದಾರೆ.

Related posts

ನಾನು ನೀಡಿದ ಲಿಸ್ಟ್ ​​ನದ್ದು ಮಾತ್ರ ಮಾಡಿ:  ಮಾಜಿ ಶಾಸಕ  ಡಾ.ಯತೀಂದ್ರ ಸಿದ್ಧರಾಮಯ್ಯ ದೂರವಾಣಿ ಕರೆ ವಿಡಿಯೋ ವೈರಲ್

ಸಾರ್ವಜನಿಕರೇ ಎಚ್ಚರ: ರಾಜ್ಯಾದ್ಯಂತ ಮತ್ತೆ ಹೆಚ್ಚಳವಾಗಿದೆ ಡೆಂಗ್ಯೂ ಹಾವಳಿ..

ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆಗೆ ಅಸ್ತು..