ಬೆಂಗಳೂರು: ರಾಜ್ಯ ಸರ್ಕಾರ ಹಲವು ಇಲಾಖೆಗಳಲ್ಲಿ ಈಗಾಗಲೇ ವರ್ಗಾವಣೆ ಮಾಡಿದ್ದು, ಮುಂದಿನ ಎರಡು ವರ್ಷಗಳ ಕಾಲ ಸಾರ್ವತ್ರಿಕ ವರ್ಗಾವಣೆ ಸ್ಥಗಿತ ಮಾಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸಾರ್ವತ್ರಿಕ ವರ್ಗಾವಣೆಗೆ ಮುಂದಾದರೆ ಮೂರು, ನಾಲ್ಕು ತಿಂಗಳ ಕಾಲ ಅಭಿವೃದ್ಧಿ ಕಾರ್ಯ ಸ್ಥಗಿತಗೊಳ್ಳುತ್ತವೆ. ವರ್ಗಾವಣೆ ಬಯಸಿದ ನೌಕರರು ಸ್ಥಳ ಹುಡುಕಿಕೊಳ್ಳುವುದರಲ್ಲಿ ಸಮಯ ಕಳೆಯುತ್ತಾರೆ. ಕಾರ್ಯಕ್ಷೇತ್ರ ಬಿಟ್ಟು ಬೆಂಗಳೂರಿಗೆ ಅಲೆದಾಡುತ್ತಾರೆ. ಹೀಗಾಗಿ ಮುಂದಿನ ಎರಡು ವರ್ಷಗಳ ಕಾಲ ವರ್ಗಾವಣೆ ಮಾಡದೆ ಅಭಿವೃದ್ಧಿಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸಚಿವಾಲಯದಲ್ಲಿ ಚಿಂತನೆ ನಡೆದಿದೆ.
ವರ್ಗಾವಣೆ ಸ್ಥಗಿತ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಶೇಕಡ 6ರ ಮಿತಿಯೊಳಗೆ ವರ್ಗಾವಣೆಗೆ ಆದೇಶ ನೀಡಲಾಗಿದ್ದು, ಆ ಮಿತಿ ಮೀರಿ ವರ್ಗಾವಣೆ ನಡೆಸಲಾಗಿದೆ
ವರ್ಗಾವಣೆಗಾಗಿ ನೌಕರರು ಅಲೆದಾಡುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ವರ್ಗಾವಣೆ ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿ ಇದ್ದು, ಎರಡು ವರ್ಷ ವರ್ಗಾವಣೆ ನಿಷೇಧಿಸಿದರೆ ಇವೆಲ್ಲವುಗಳಿಗೆ ಕಡಿವಾಣ ಹಾಕಬಹುದು ಚಿಂತನೆ ನಡೆದಿದೆ ಎನ್ನಲಾಗಿದೆ.