ಶಿವಮೊಗ್ಗ: ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನೇತ್ರದಾನ ಜಾಗೃತಿ ಪಾಕ್ಷಿಕ ಮಾಸಾಚರಣೆ ಅಂಗವಾಗಿ ಜಾಥಾ ನಡೆಯಿತು. ಬೆಳಿಗ್ಗೆ ಎಟಿಎನ್ಸಿ ಕಾಲೇಜಿನಿಂದ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಹಾಗೂ ಎಟಿಎನ್ಸಿಸಿ ವಿದ್ಯಾರ್ಥಿಗಳು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ ಜಾಥಾ ನಡೆಸಿದರು.
ಪ್ರಕೃತಿ ಮಾನವನ ಆಸೆಯನ್ನು ಈಡೇರಿಸುತ್ತದೆ ದುರಾಸೆಯನ್ನಲ್ಲ. ನೇತ್ರದಾನ ಬಹಳ ಮುಖ್ಯ. ಕಣ್ಣನ್ನು ಸುರಕ್ಷತೆಯಿಂದ ನೋಡಿಕೊಳ್ಳಿ ಮುಂತಾದ ಜಾಗೃತಿ ಮೂಡಿಸುವ ಪ್ಲಕಾರ್ಡ್ ಹಿಡಿದು ಘೋಷಣೆಗಳೊಂದಿಗೆ ಜಾಥಾ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ,
ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರುಗಳಾದ ಡಾ. ಮಹೇಶ್, ಡಾ. ಮಲ್ಲಿಕಾರ್ಜುನ, ಡಾ. ಪ್ರದೀಪ್, ರವಿಶಂಕರ್, ಗಾಯಿತ್ರಿ ಶಾಂತಾರಾಮ್. ಅನಿತಾ, ಪ್ರದೀಪ್ ಹಾಗೂ ಡಿವೈಎಸ್ಪಿ ಬಾಲರಾಜ್ ಮುಂತಾದವರಿದ್ದರು.
previous post