ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೆಂಗಳೂರಿನ ಇಸ್ರೋ ಕಚೇರಿಗೆ  ಪ್ರಧಾನಿ ಮೋದಿ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ.

ಬೆಂಗಳೂರು: ಚಂದ್ರಯಾನ-3 ಯಶಸ್ಸಿ ಆಗುತ್ತಿದ್ದಂತೆ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಸ್ರೋ  ವಿಜ್ಞಾನಿಗಳನ್ನ ಅಭಿನಂದಿಸಲು  ಇಸ್ರೋ ಕಚೇರಿಗೆ ಭೇಟಿ ನೀಡಿದರು. HAL ಏರ್​​ಪೋರ್ಟ್​ನಲ್ಲಿ ಪ್ರಧಾನಿ ಮೋದಿ ಅವರಿಗೆ  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.‌ದಯಾನಂದ್​​​​, ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್​, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್​ರಿಂದ ಸ್ವಾಗತಿಸಿದರು.

ನಂತರ ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿಕೊಟ್ಟು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಪ್ರಧಾನಿ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.

ಚಂದ್ರಯಾನ-3 ಯೋಜನೆ, ಪ್ರಜ್ಞಾನ್​ ರೋವರ್​​ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ಪ್ಲಾನ್: ಇನ್ಮುಂದೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರು..

ನಿರೀಕ್ಷೆಗಿಂತ ಕಡಿಮೆ ಮೊತ್ತಕ್ಕೆ ಮಾರಾಟವಾಯ್ತು 20 ಕೋಟಿ ರೂ ಮೌಲ್ಯದ ಟಿಪ್ಪು ಸುಲ್ತಾನ್ ಖಡ್ಗ.

ರ್ನಾಟಕ ರಾಜ್ಯೋತ್ಸವ: ಶಿಕ್ಷಕರು ಮತ್ತು ಗುರು ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಎಸ್ ಟೀಕ್ಯಾನಾಯ್ಕ ಅವರಿಗೆ ಸನ್ಮಾನ ಸನ್ಮಾನ