ಮೈಸೂರು: ಕಾವೇರಿ ನದಿ ನೀರುವ ವಿವಾದ ಸಂಬಂಧ ಇಂದು ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ. ನಮ್ಮ ರೈತರ ಹಿತ ಕಾಪಾಡುವ ಕೆಲಸ ರಾಜ್ಯ ಸರ್ಕಾರ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಹರಕೆ ಸಲ್ಲಿಸಿದ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಚುನಾವಣೆಗೂ ಮುನ್ನ ಇಲ್ಲಿ ಹರಕೆ ಕಟ್ಟಕೊಂಡಿದ್ದವು. ನಾವು ನುಡಿದಂತೆ ನಡೆದಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. ಇದು ನಮ್ಮ ಸಾಧನೆ. ಹೀಗಾಗಿ ಇಂದು ಹರಕೆ ತೀರಿಸಿದ್ದೇವೆ ಎಂದರು.