ಮಂಡ್ಯ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಮಂಡಳಿ ನೀಡಿದ್ದ ಆದೇಶದ ವಿರುದ್ಧ ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಕೆಆರ್ ಎಸ್ ಜಲಾಶಯದ ಬಳಿ ರೈತಮುಖಂಡರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಾವೇರಿ ನೀರು ನಿರ್ವಹಣ ಮಂಡಳಿ ವಿರುದ್ಧ ‘ಕುರುಡು ನ್ಯಾಯಾಧೀಕಾರಣ’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.