ಶಿವಮೊಗ್ಗ: ತಾಲೂಕಿನ ಹಸೂಡಿ ಗ್ರಾಪಂ ವತಿಯಿಂದ ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೆ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ವೀಕ್ಷಣೆಯನ್ನು ನಾಳೆ ಬೆಳಿಗ್ಗೆ ಹಸೂಡಿಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭವಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರಾ ಕೆ.ಆರ್.ಮೋಹನ್ ಕೋರಿದ್ದಾರೆ.