ನವದೆಹಲಿ: ನಿನ್ನೆಯ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಹೇಳಿದಷ್ಟೇ ನೀರನ್ನ ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ.
ಇಂದು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಸಭೆಯಲ್ಲಿ ತೀರ್ಮಾನಿಸಿದೆ.
ತಮಿಳುನಾಡು ಸರ್ಕಾರ ಪ್ರತಿನಿತ್ಯ 7500 ಕ್ಯೂಸೆಕ್ ನೀರು ಬಿಡುಗಡೆಗೆ ಸಭೆಯಲ್ಲಿ ಮನವಿ ಮಾಡಿತು. ಆದರೆ ಕರ್ನಾಟಕ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿ 3ಸಾವಿರ ಕ್ಯೂಸೆಕ್ ಅಷ್ಟೇ ನೀರು ಹರಿಸುವುದಾಗಿ ವಾದಿಸಿತು.
ಆದರೆ ಕರ್ನಾಟಕ ಸರ್ಕಾರದ ವಾದ ಒಪ್ಪದ ಪ್ರಾಧಿಕಾರ ನಿನ್ನೆಯ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಹೇಳಿದಷ್ಟೇ ನೀರು ಬಿಡುಗಡೆಗೆ ಆದೇಶಿಸಿದೆ.