ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಲಿ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೇಶ್ ಗ್ರಾಮದೇವತೆ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮಾಸಿಕ 2000 ರೂ. ವಿತರಣೆಯ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ ನೊಂದಣಿ ಮಾಡಿಸಿದ ಎಲ್ಲಾ ಕುಟುಂಬದ ಯಜಮಾನಿಗೆ ತಲುಪಲಿದೆ ಹೆಚ್.ಸಿ ಯೋಗೇಶ್ ಅವರು ದೇವಿಗೆ ಭಕ್ತಿ ಸಮರ್ಪಣೆ ಮಾಡುವ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಒಳಿತನ್ನು ಮಾಡಲಿ ಎಂದು ಗೃಹಲಕ್ಷ್ಮಿ ಯೋಜನೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಸದಸ್ಯೆ ಯಮುನಾ ರಂಗೇಗೌಡ, ಮಾಜಿ ಉಪಮೇಯರ್ ವಿಯಲಕ್ಷ್ಮಿ ಸಿ. ಪಾಟೀಲ್, ಮಾಜಿ ಸದಸ್ಯರಾದ ವಿಶ್ವನಾಥ್ ಕಾಶಿ, ಶ್ಯಾಮಸುಂದರ್, ಲಕ್ಷ್ಮಣ್, ಪಕ್ಷದ ಮುಖಂಡರಾದ ಕೆ.ರಂಗನಾಥ್, ಕೆ. ದೇವೇಂದ್ರಪ್ಪ, ಶಿವಕುಮಾರ್, ರಂಗೇಗೌಡ ಹಾಗೂ ಪಕ್ಷದ ವಿವಿಧ ಘಟಕಗಳ ಮುಖಂಡರು ಹಾಜರಿದ್ದರು.