ಭದ್ರಾವತಿ ಆ.30: ತಾಲ್ಲೂಕಿನ ಬಿ ಆರ್ ಪಿಯ ಶಾಂತಿನಗರದ ಬಿಜಿಎಸ್ ಕುವೆಂಪು ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಧೀನ ಬಂದು ಟ್ರಸ್ಟ್ ಅಧ್ಯಕ್ಷರಾದ ರಮೇಶ್ ಅವರು,ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿ ಶಾಖೆ ಆಡಳಿತಾಧಿಕಾರಿಗಳಾದ ಜಗದೀಶ್.ಬಿ ಅವರು, ಸರ್ಕಾರಿ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪೃಥ್ವಿರಾಜರವರು,ಬಿ ಆರ್ ಪಿಯ ಸಿ ಆರ್ ಪಿ ಅಧಿಕಾರಿಗಳಾದ ಪ್ರಿಯಾಂಕ ರವರು, ಸಿಂಗಮನೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳಮ್ಮ ರವರು, ಬಿಜಿಎಸ್ ಕುವೆಂಪು ಶಾಲೆಯ ಪ್ರಾಂಶುಪಾಲರಾದ ಅಶೋಕ್ ಅವರು ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.