ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವಿಧಾನ ಪರಿಷತ್ ಸದಸ್ಯರಾಗಿ ಉಮಾಶ್ರೀ, ಸುಧಾಮ್ ದಾಸ್, ಎಂ.ಆರ್.ಸೀತಾರಾಮ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡಿರುವ ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ, ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿಯವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ಸಚಿವರು ಉಪಸ್ಥಿತರಿರಲಿದ್ದಾರೆ. 2023ರ ಮೇ 17ರಂದು ಮೋಹನ್ ಕೊಂಡಜ್ಜಿ ಹಾಗೂ ಪಿ.ಆರ್ ರಮೇಶ್ ನಾಮನಿರ್ದೇಶನ ಅವಧಿ ಮುಕ್ತಾಯವಾಗಿತ್ತು. ಜೂನ್ 8ರಂದು ಸಿ.ಎಂ.ಲಿಂಗಪ್ಪ ಸದಸ್ಯತ್ವ ಅವಧಿ ಮುಕ್ತಾಯವಾಗಿತ್ತು.

ಈ ಮೂರು ಸ್ಥಾನಕ್ಕೆ 20ಕ್ಕಿಂತ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಉಮಾಶ್ರೀ, ಸುಧಾಮ್ ದಾಸ್, ಎಂ.ಆರ್.ಸೀತಾರಾಮ್ ಹೆಸರು ಅಂತಿಮಗೊಂಡಿತ್ತು.  2024ರ ಅಕ್ಟೋಬರ್‌ನಲ್ಲಿ ಮತ್ತೆರೆಡು ನಾಮನಿರ್ದೇಶನ ಸ್ಥಾನ ಖಾಲಿಯಾಗಲಿದೆ.

Related posts

ದೇಶ ಕಂಡ ಅತ್ಯುತ್ತಮ ನ್ಯಾಯಧೀಶರು ಡಾ.ಶಿವರಾಜ್ ಪಾಟೀಲ್- ಭಾರತ ರತ್ನ ಡಾ.ಸಿ.ಎನ್.ಆರ್.ರಾವ್ ಬಣ್ಣನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ.

‘ಮಹಿಳಾ ಮೀಸಲಾತಿ ಮಸೂದೆ:ಲೋಕಸಭೆಯಲ್ಲಿ ಅಂಗೀಕಾರ..