ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ- ಡಿಸಿಎಂ ಡಿಕೆ ಶಿವಕುಮಾರ್.

ನವದೆಹಲಿ, :  ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ಹೀಗಾಗಿ ದೆಹಲಿ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ. ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.

ನವದೆಹಲಿಯಲ್ಲಿ ಕಾನೂನು ತಜ್ಞರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಾಳೆ ವಿಚಾರಣೆ ಇರುವ ಹಿನ್ನೆಲೆಯಲ್ಲಿ ತಜ್ಞರ ಜತೆ ಚರ್ಚೆ ಮಾಡಿದ್ದೇನೆ. ಹಿರಿಯ ವಕೀಲ ಶ್ಯಾಮ್ ದಿವಾನ್ ಜೊತೆಗೂ ಚರ್ಚೆ ಮಾಡಲಿದ್ದೇವೆ. ತಮಿಳುನಾಡು ನಿತ್ಯ 24,000 ಕ್ಯೂಸೆಕ್ ನೀರು ಬಿಡಬೇಕೆಂದು ಕೇಳಿತ್ತು. ಸದ್ಯ 5000 ಕ್ಯೂಸೆಕ್​​ ಗೆ ಇಳಿಸಿದೆ, ವಾಸ್ತವಾಂಶ ಗಮನಕ್ಕೆ ತಂದಿದ್ದೇವೆ ಎಂದರು.

ನಾವು ನೀರು ಬಿಟ್ಟಿದ್ದೇವೆ, ಅವರು ಹೇಗೆ ಬಳಕೆ‌ ಮಾಡಿಕೊಂಡಿದ್ದಾರೆ ಎಂಬುದು ಅಗತ್ಯವಿಲ್ಲ. ನಾವು ಆ ವಿಚಾರ ಚರ್ಚೆ ಮಾಡಲ್ಲ. ಮೇಕೆದಾಟು ಒಂದೇ ಪರಿಹಾರ, ಇದು ತಮಿಳುನಾಡಿಗೆ ಅನುಕೂಲ. ವಾಸ್ತವಾಂಶ ನೋಡಲು ಕಾವೇರಿ ನೀರು ನಿಯಂತ್ರಣಾ ಸಮಿತಿ ತಂಡವನ್ನ ಕರೆಯಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Related posts

‘NPS’ ಬೇಡ, ‘OPS’ ಜಾರಿ ಮಾಡಿ; 7ನೇ ವೇತನ ಆಯೋಗಕ್ಕೆ ನೌಕರರ ಸಂಘದಿಂದ ವರದಿ

ಮಕ್ಕಳ ಮೊಬೈಲ್, ಟಿವಿ ವೀಕ್ಷಣೆಗೆ ಬೀಳಬೇಕಿದೆ ಕಡಿವಾಣ: ಇಲ್ಲದಿದ್ರೆ ಸಮಸ್ಯೆ ಕಟ್ಟಿಟ್ಟ ಬುತ್ತಿ..

ಬೆಳಿಗ್ಗೆ ಪೊಲಿಸ್ ಡ್ಯೂಟಿ, ರಾತ್ರಿಯಾದ್ರೆ ಕಳ್ಳತನ:  ಹೆಡ್​ ಕಾನ್ಸ್​ ಟೇಬಲ್ ಬಂಧನ.