ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಎಲ್ ಸಂತೋಷ್ ಮೊದಲು ಬಿಜೆಪಿಯಲ್ಲಿರುವವರನ್ನ ಉಳಿಸಿಕೊಳ್ಳಲಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಹುಬ್ಬಳ್ಳಿ:  ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ಸಂಘಟನಾಕಾರ್ಯದರ್ಶಿ ಬಿಎಲ್ ಸಂತೋಷ್ ಗೆ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಜಗದೀಶ್ ಶೆಟ್ಟರ್,  ಮೊದಲು ಬಿಜೆಪಿಯಲ್ಲಿರುವವರನ್ನ ಉಳಿಸಿಕೊಳ್ಳಲಿ. ಬಿಜೆಪಿ ಅಸ್ತಿತ್ವ ಉಳಿಸಿಕೊಂಡರೇ ಸಾಕಾಗಿದೆ. ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ.  ಬರೀ ಅಪರೇಷನ್ ಮಾಡೋದೇ ಕೆಲಸವಾಗಿದೆ.  ಬಿಜೆಪಿಯಲ್ಲಿ ಹಿರಿಯರನ್ನ ಕಡೆಗಣಿಸಿದ್ದಾರೆ ಎಂದು ಕಿಡಿಕಾರಿದರು.

ಬಿ.ಎಲ್ ಸಂತೋಷವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ. ಶಾಸಕರನ್ನು, ಮಾಜಿ ಶಾಸಕರನ್ನು‌ ಉಳಸಿಕೊಳ್ಳಲಿ. ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡುವುದು. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Related posts

ಎಸ್ಇಪಿ ಜಾರಿ ನಿರ್ಧಾರ ಕೂಡಲೇ ಕೈಬಿಡಿ- ಸಿ.ಟಿ ರವಿ ಒತ್ತಾಯ.

ನಾಳೆ ಬೆಂಗಳೂರು ಸಂಪೂರ್ಣ ಬಂದ್‌: ನೂರಾರು ಸಂಘ ಸಂಸ್ಥೆಗಳಿಂದ ಬೆಂಬಲ.

ಜಿಲ್ಲಾ ಮಟ್ಟದ ಖೋ – ಖೋ :  ತಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರಿಗೆ ಪ್ರಥಮ ಸ್ಥಾನ.