ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಬ್ಬರು ಬಿಜೆಪಿ ನಾಯಕರಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಚರ್ಚೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಅಪರೇಷನ್ ಹಸ್ತದ ಸಾಕಷ್ಟು  ಸದ್ದು ಮಾಡುತ್ತಿದ್ದು, ಈ ಮಧ್ಯೆ ಇಬ್ಬರು ಬಿಜೆಪಿ ಮುಖಂಡರು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್​​ಆರ್ ಶಿವರಾಮೇಗೌಡ ನಿನ್ನೆ ರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ರನ್ನ ಭೇಟಿಯಾಗಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ ಉಭಯ ನಾಯಕರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ‘ಆಪರೇಷನ್ ಹಸ್ತ’ದ ವದಂತಿ ಹೆಚ್ಚುತ್ತಿರುವ ಸಂದರ್ಭದಲ್ಲೇ ಉಭಯ ನಾಯಕರು ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

Related posts

ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಳ: ಸರ್ಕಾರಕ್ಕೆ ಶುರುವಾಯ್ತು ಟೆನ್ಷನ್.

ಆದಿ ರಂಗನಾಥ ದೇವರ ಜಾಗದ ನಕಲಿ ಹಕ್ಕುಪತ್ರ ರದ್ದುಪಡಿಸಲು ಒತ್ತಾಯ.

ಭಾರತೀಯರಿಗೆ ವೀಸಾ ಮುಕ್ತ ಪ್ರವೇಶ ಘೋಷಿಸಿದ ನೆರೆಯ ದೇಶ..