ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇದೀಗ ಕಾಂಗ್ರೆಸ್ ಸೇರಿದ್ದಾರೆ.
ಈ ಕುರಿತು ಮಾತನಾಡಿದ ಸುಕುಮಾರ್ ಶೆಟ್ಟಿ, ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇಡುತ್ತಿದ್ದೇನೆ ಎಂದರು.