ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಮೈತ್ರಿ ಮಾತುಕತೆ ಬಹಳ ಅವಶ್ಯಕ: ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ- ಮಾಜಿ ಸಿಎಂ ಬೊಮ್ಮಾಯಿ ಅಭಿಮತ.

ಬೆಂಗಳೂರು:  ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಎರಡೂ ಪಕ್ಷಗಳು ಮೈತ್ರಿ  ಬಹುತೇಕ ಫಿಕ್ಸ್ ಎನ್ನಲಾಗಿದೆ.   ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುವುದು ಖಚಿತವಾಗಿದೆ. ಈ  ಕುರಿತು ಮಾಜಿ ಸಿಎಂ  ಬಿಎಸ್ ವೈ ಬೆನ್ನಲ್ಲೆ ಈಗ ಬಸವರಾಜ ಬೊಮ್ಮಾಯಿ ಸಹ ಖಚಿತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ  ಬಸವರಾಜ ಬೊಮ್ಮಾಯಿ, ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ, ಮಹತ್ವದ್ದಾಗಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವುದು ಮುಖ್ಯವಾಗಿತ್ತು. ಹೀಗಾಗಿ ನಾವು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮೈತ್ರಿ ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ ಆಗಲಿದೆ. ನಮ್ಮ ಹೈಕಮಾಂಡ್ ಇದರ ಬಗ್ಗೆ  ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

Related posts

ಗೂಗಲ್ ಮ್ಯಾಪ್ ನಲ್ಲೂ ತ್ರಿವರ್ಣ ಧ್ವಜ ಜೊತೆ ಭಾರತ ಹೆಸರು..!

ಭಾರತೀಯ ವಿದ್ಯಾ ಭವನದಲ್ಲಿ ‘ಗೊಂಬೆ ಹಬ್ಬ’

ಪ್ರೇರಣಾ ಶಕ್ತಿ ವೃದ್ಧಿಸುವ ಸ್ಕೌಟ್ಸ್ ಗೈಡ್ಸ್-ಡಾ. ವಿಷ್ಣುಮೂರ್ತಿ