ಶಿವಮೊಗ್ಗ: ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪನಾಯಕ ಅರಮನೆಯಲ್ಲಿ ನಡೆದ “ನನ್ನ ಮಣ್ಣು, ನನ್ನ ದೇಶ” ಅಭಿಯಾನಕ್ಕೆ ಇಂದು ಚಾಲನೆ ನೀಡಿ ದೇಶಕ್ಕಾಗಿ ದುಡಿದ ಮಾಜಿ ಸೈನಿಕರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರುದ್ರೇಗೌಡ್ರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.