ಶಿವಮೊಗ್ಗ: ಕುವೆಂಪು ವಿ.ವಿ.ಯ ರಾಷ್ಟ್ರೀಯ ಸೇವಾ ಯೋಜನೆಯ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕಚೇರಿ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆಯನ್ನು ಓದಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುವೆಂಪು ವಿ.ವಿ.ಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಸಂವಿಧಾನಕ್ಕೆ ಗೌರವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲ ನಮ್ಮ ನಮ್ಮ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವುದರ ಮೂಲಕ ಸದೃಢ ಸಮಾಜ ನಿರ್ಮಿಸೋಣ ಮತ್ತು ದೀನ ದುರ್ಬಲರಿಗೆ ಸಹಾಯ ಹಸ್ತ ಚಾಚುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಬೇಕು, ಸರ್ಕಾರದ ಯೋಜನೆಗಳು ಸತ್ಪಾತ್ರರಿಗೆ ಸಿಗುವಂತಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್, ರಾಚಪ್ಪ, ಅರುಣ್, ಜಯಂತ್ ಬಾಬು,ಉ ಪಸ್ಥಿತರಿದ್ದರು.