ನವದೆಹಲಿ: ಜನರ ನಡುವೆ ಭೇಟಿ ನೀಡುವ ಮೂಲಕ ಸರಳತೆ ಮೆರೆಯುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೆ ಇದೀಗ ತಮ್ಮ ಸಿಂಪ್ಲಿಸಿಟಿ ತೋರಿಸಿದ್ದಾರೆ.
ಹೌದು ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಲಿ ಡ್ರೆಸ್ ಹಾಕಿಕೊಂಡು ಹಮಾಲರ ಜೊತೆ ಲಗೇಜ್ ಹೊತ್ತು ಹೆಜ್ಜೆ ಹಾಕುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ಮುಖಂಡರು ಕೂಲಿಗಳೊಂದಿಗೆ ಮಾತನಾಡಲು ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಹಮಾಲರೊಂದಿಗೆ ಸಂವಾದ ನಡೆಸಿದರು.
ರಾಹುಲ್ ಗಾಂಧಿ ಅವರು ಹಮಾಲರೊಂದಿಗೆ ಸುದೀರ್ಘವಾಗಿ ಮಾತನಾಡಿದರು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಎಂಬ ಮಾಹಿತಿ ಲಭ್ಯವಾಗಿದೆ
ಕೆಲವು ಹಮಾಲರು ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವರ ಉನ್ನತಿಗಾಗಿ ಕೆಲಸ ಮಾಡಲು ಅವರನ್ನು ಭೇಟಿಯಾಗುವಂತೆ ಒತ್ತಾಯಿಸಿದ ತಿಂಗಳ ನಂತರ ರಾಹುಲ್ ಅವರನ್ನು ಭೇಟಿ ಮಾಡಿದ್ದಾರೆ.
ಜನರ ನಡುವೆ ಭೇಟಿ ನೀಡುವ ಮೂಲಕ ಜನರನ್ನು ಅಚ್ಚರಿಗೊಳಿಸಿದ್ದಾರೆ. ರಾಹುಲ್ ಗಾಂಧಿ ಅವರು ಬೆಂಗಾಲಿ ಮಾರುಕಟ್ಟೆ, ಜಾಮಾ ಮಸೀದಿ ಪ್ರದೇಶಕ್ಕೆ ಆಹಾರ ಸೇವಿಸಲು ಭೇಟಿ ನೀಡಿದ್ದರು ಮತ್ತು ನಂತರ ಯುಪಿಎಸ್ಸಿ ಆಕಾಂಕ್ಷಿಗಳೊಂದಿಗೆ ಸಂವಾದ ನಡೆಸಲು ಮುಖರ್ಜಿ ನಗರ ಪ್ರದೇಶಕ್ಕೆ ಭೇಟಿ ನೀಡಿದ್ದರು.