ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಶಿವಮೊಗ್ಗದಲ್ಲಿ ಕರವೇ ಪ್ರತಿಭಟನೆ.

ಶಿವಮೊಗ್ಗ: ತಮಿಳು ನಾಡಿಗೆ ಯಾವುದೇ ಕಾರಣಕ್ಕೂ  ಕಾವೇರಿ ನದಿ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿ ಜೈಲು
 ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಪ್ರತಿಭಟನೆ ನೆಡೆಯಿತು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ ಕಾವೇರಿ ನದಿಯ ಕೆ ಆರ್ ಎಸ್ ಆಣೆಕಟ್ಟಿನಲ್ಲಿ ನೀರಿನ ಕೊರತೆ ಇದೆ.
ಬೆಳೆಗಳಿಗೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಯಿಂದ ನೀರು ಬಿಡುಗಡೆ ಮಾಡ ಬಾರದು ಎಂದು   ಪ್ರತಿಭಟನೆಗಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿಕಾವೇರಿ ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹನ ಮಾಡಲಾಯಿತು. ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಮಂಜುನಾಥ ಎಸ್  ಕೊಟ್ಯಾನ್ ನಿಂಬೆಹಣ್ಣು ಮಂಜುನಾಥ್ ಗಂಗಾಧರ  ಸೇರಿದಂತೆ ಹಲವರಿದ್ದರು

Related posts

ಕಾಂಗ್ರೆಸ್ ಸೋಲಿಸುವ ಉದ್ದೇಶದಿಂದ ಜೆಡಿಎಸ್‍ ಜೊತೆ ಮೈತ್ರಿ- ಕೆಎಸ್ ಈಶ್ವರಪ್ಪ

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ: ಸಿಎಂ ಸಿದ್ದರಾಮಯ್ಯ ನುಡಿ