ಶಿವಮೊಗ್ಗ: ತಮಿಳು ನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿ ಜೈಲು
ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಪ್ರತಿಭಟನೆ ನೆಡೆಯಿತು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ ಕಾವೇರಿ ನದಿಯ ಕೆ ಆರ್ ಎಸ್ ಆಣೆಕಟ್ಟಿನಲ್ಲಿ ನೀರಿನ ಕೊರತೆ ಇದೆ.
ಬೆಳೆಗಳಿಗೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಯಿಂದ ನೀರು ಬಿಡುಗಡೆ ಮಾಡ ಬಾರದು ಎಂದು ಪ್ರತಿಭಟನೆಗಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿಕಾವೇರಿ ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹನ ಮಾಡಲಾಯಿತು. ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಮಂಜುನಾಥ ಎಸ್ ಕೊಟ್ಯಾನ್ ನಿಂಬೆಹಣ್ಣು ಮಂಜುನಾಥ್ ಗಂಗಾಧರ ಸೇರಿದಂತೆ ಹಲವರಿದ್ದರು