ಶಿವಮೊಗ್ಗ: ಮಾಜಿ ಸಂಸದ ಆಯನೂರು ಮಂಜುನಾಥ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಜುನಾಥ್ ಅವರ ಕುಟುಂಬದಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್. ಎನ್ ರಮೇಶ್, ಮಂಜುನಾಥ ಗೌಡ. ವೈ.ಎಚ್. ನಾಗರಾಜ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ಸಿನ ಗಣ್ಯರು ಮತ್ತು ಆಯನೂರು ಮಂಜುನಾಥ್ ಕುಟುಂಬಸ್ಥರು ಉಪಸ್ಥಿತರಿದ್ದರು.