ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಶಿವಮೊಗ್ಗ ಇದರ ಆಶ್ರಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾದ ಬಿ. ಏಸುದಾಸ್ ಹಾಗೂ ವಿವಿಧ ಪಕ್ಷಗಳ ಪ್ರಮುಖರು ನಿನ್ನೆ ನಗರದ ಸಂತ ಥಾಮಸ್ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರಾದ ವಿಲ್ಸನ್ ಆಂತೋನಿ ರಾಜ್ಯ ಕ್ರೈಸ್ತ ಮುಖಂಡ ಯೇಸುದಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಆರ್.ಎಂ.ಮಂಜುನಾಥ ಗೌಡ. ಆಯನೂರು ಮಂಜುನಾಥ್. ಕಲೀಮ್ ಪಾμÁ, ಎನ್.ರಮೇಶ್. ಎಸ್.ಕೆ.ಮರಿಯಪ್ಪ, ಧೀರರಾಜ್ ಹೊನ್ನವಿಲೆ, ವೈ.ಎಚ್. ನಾಗರಾಜ್, ಹಿರಣ್ಣಯ್ಯ, ಐಡಿಯಲ್ ಗೋಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕ್ರೈಸ್ತ ಸಮಾಜದ ಮುಖಂಡರು ಉಪಸ್ಥಿತರಿದ್ದರು.