ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಗೆ ಆನೇಕ ಮುಖಂಡರು ಒಲವು ತೋರಿಸಿದ್ದಾರೆ. ಹೀಗಾಗಿ ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಜೆಡಿಎಸ್-ಬಿಜೆಪಿ ಮೈತ್ರಿ ಬೆನ್ನಲ್ಲೇ ಹಲವು ಮುಖಂಡರು ಕಾಂಗ್ರೆಸ್ ಗೆ ಬರ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅನೇಕರು ಒಲವು ತೋರಿಸುತ್ತಿದ್ದಾರೆ. ಮೂವರು ಮಾಜಿ ಶಾಸಕರು ಪಕ್ಷ ಸೇರುತ್ತೇನೆ ಅಂತ ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ಮೈತ್ರಿ ವಿರೋಧಿಸಿ ಮುಖಂಡರು ಹೊರ ಬರುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲೂ ಕಾಂಗ್ರೆಸ್ ಗೆ ಸೇರುವ ಆಸೆ ವ್ಯಕ್ತಪಡಿಸಿದ್ದು, ಸೂಕ್ತ ಸಂದರ್ಭದಲ್ಲಿ ಸೂಕ್ತವಾದ ನಿರ್ಧಾರವನ್ನು ಮಾಡಿದ್ದಾರೆ. ಸ್ಥಳೀಯ ಚುನಾವಣೆ, ಕಾರ್ಪೊರೇಷನ್ ಚುನಾವಣೆ ಹತ್ತಿರ ಬರುತ್ತಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.