ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಎಸ್. ಮಧು ಬಂಗಾರಪ್ಪ ಅವರನ್ನ ಸನ್ಮಾನಿಸಲಾಯಿತು.
ಇಂದು ತರೀಕೆರೆ ತಾಲ್ಲೂಕ್ ಭಾವಿಕೆರೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ತೆರಳುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ, ಭದ್ರಾವತಿ ತಾಲ್ಲೂಕ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ನೈರತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಂ.ರಮೇಶ್ ಶೆಟ್ಟಿ ಯವರ ಶಂಕರಘಟ್ಟದ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನ ಆತ್ಮೀಯವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಆಧ್ಯಾಪಕರುಗಳು ಹಾಗೂ ಶ್ರೀ ಮಧುಬಂಗಾರಪ್ಪನವರು ನೂರಾರು ಅಭಿಮಾನಿಗಳು ಹಾಜರಿದ್ದರು.