ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಚುನಾವಣಾ ಬಾಂಡ್: ‘ಕಾನೂನುಬದ್ಧ ಲಂಚ: ಮಾಜಿ ಕೇಂದ್ರಸಚಿವ ಚಿದಂಬರಂ ಆರೋಪ

ನವದೆಹಲಿ: ಚುನಾವಣಾ ಬಾಂಡ್ ಎಂಬುದು ‘ಕಾನೂಬು ಬದ್ಧ ಲಂಚ. ಅಕ್ಟೋಬರ್ 4ರಂದು ಇದು ಮತ್ತೆ ತೆರೆಯಲಿದ್ದು ಬಿಜೆಪಿಗೆ ಚಿನ್ನದ ಫಸಲನ್ನೇ ನೀಡಲಿದೆ  ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಚಿದಂಬರಂ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಚುನಾವಣಾ ಬಾಂಡ್ ನ 28ನೇ ಕಂತಿಗೆ ಸರ್ಕಾರವು ಅನುಮೋದನೆ ನೀಡಿದೆ. ಅ. 4ರಿಂದ 10 ದಿನಗಳ ಕಾಲ ಈ ಬಾಂಡ್ಗಳು ಖರೀದಿಗೆ ಲಭ್ಯವಿರಲಿವೆ.ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಹಾಗೂ ಮೀಝೋರಾಂ ಪಂಚರಾಜ್ಯ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರದಿಂದ ಈ ಘೋಷಣೆಯಾಗಿದೆ. ಈ ರಾಜ್ಯಗಳಿಗೆ ಶೀಘ್ರದಲ್ಲಿ ಚುನಾವಣೆ ಘೋಷಣೆಯಾಗಲಿದೆ ಎಂದರು.

ಚಿದಂಬರಂ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿದ್ದು, ‘ಅ. 4ರಿಂದ ಮಾರಾಟವಾಗಲಿರುವ ಚುನಾವಣಾ ಬಾಂಡ್ಗಳಲ್ಲಿ ಈ ಹಿಂದಿನಂತೆಯೇ ಬಿಜೆಪಿಗೆ ಶೇ 90ರಷ್ಟು ದೇಣಿಗೆ ಸಲ್ಲಿಕೆಯಾಗಲಿವೆ. ಹೀಗಾಗಿ ಬಿಜೆಪಿಗೆ ಇದು ಚಿನ್ನದ ಫಸಲನ್ನೇ ನೀಡಲಿದೆ’ ಎಂದಿದ್ದಾರೆ.

‘ಕ್ರೋನಿ ಬಂಡವಾಳಶಾಹಿಗಳು ದೆಹಲಿಯಲ್ಲಿ ಕುಳಿತಿರುವ ತಮ್ಮ ಪ್ರಭು ಹಾಗೂ ಮಾಸ್ಟರ್ಗಳಿಗೆ ಕಾಣಿಕೆ ನೀಡಲು ಚೆಕ್ ಪುಸ್ತಕಗಳನ್ನು ತೆರೆದಿಟ್ಟುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯ ದೇಣಿಗೆ ನೀಡುವ ಹಂತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ನಗದು ನೀಡಲು ಪರ್ಯಾಯವಾಗಿ ಚುನಾವಣಾ ಬಾಂಡ್ಗಳನ್ನು ಜಾರಿಗೆ ತರಲಾಗಿದೆ. 2018ರಲ್ಲಿ ಮೊದಲ ಬಾರಿಗೆ ಚುನಾವಣಾ ಬಾಂಡ್ಗಳು ಪರಿಚಯಿಸಲಾಯಿತು. ಇದನ್ನು ನೀಡಲು ಭಾರತೀಯ ಸ್ಟೇಟ್ ಬ್ಯಾಂಕ್ಗೆ ಮಾತ್ರ ಕೇಂದ್ರ ಅನುಮತಿ ನೀಡಿದೆ. ಈ ಚುನಾವಣಾ ಬಾಂಡ್ಗಳನ್ನು ಭಾರತೀಯ ಪ್ರಜೆಗಳು, ಸಂಘ ಹಾಗೂ ಸಂಸ್ಥೆಗಳು ಖರೀದಿಸಲು ಅವಕಾಶವಿದೆ. ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಶೇ 1ಕ್ಕಿಂತ ಹೆಚ್ಚು ಮತ ಪಡೆದ ಯಾವುದೇ ನೋಂದಾಯಿತ ಪಕ್ಷವು ಈ ಚುನಾವಣಾ ಬಾಂಡ್ ಪಡೆಯಲು ಅರ್ಹತೆ ಹೊಂದಿರುತ್ತವೆ.

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪೈಶಾಚಿಕ ಕೃತ್ಯಗಳಲ್ಲಿ ಚುನಾವಣಾ ಬಾಂಡ್ ಸ್ಕೀಮ್ ಕೂಡಾ ಒಂದು. ಇದು ದೇಶದ ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನೇ ದುರ್ಬಲಗೊಳಿಸುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ. .

 

Related posts

ವಿನೂತನ ಚಟುವಟಿಕೆಗಳಿಂದ ರಾಜ್ಯ ಮಟ್ಟದ ಅತ್ಯುತ್ತಮ  ಗರಿ ಮುಡಿಗೇರಿಸಿದೆ ಶಿವಮೊಗ್ಗ ಐಎಂಎ ಶಾಖೆ

ಪರೀಕ್ಷೆ ಬರೆಯುವಾಗಲೇ ಹೃದಯಾಘಾತ: 9ನೇ ತರಗತಿ ವಿದ್ಯಾರ್ಥಿ ಸಾವು.

1 ಸೆಕೆಂಡ್ ನಲ್ಲಿ 150 ಮೂವಿ ಡೌನ್ಲೋಡ್ ಮಾಡುವ ಸಾಮರ್ಥ್ಯದ ವಿಶ್ವದ ಅತ್ಯಂತ ವೇಗದ ಇಂಟರ್ನೆಟ್ ಪ್ರಾರಂಭ.