ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟದಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ
ಈದ್ ಮಿಲಾದ್ ಹಬ್ಬ, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ಎರಡು ಸಮುದಾಯದ ಮುಖಂಡರನ್ನು ಕರೆದು ಶಾಂತಿ ಸಭೆ ಮಾಡಿದ್ದೇವು. ಅ.1ಕ್ಕೆ ಈದ್ ಮಿಲಾದ್ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದರು. ಶಿವಮೊಗ್ಗದಲ್ಲಿ ಗಣೇಶ ಹಬ್ಬವನ್ನೂ ಅದ್ಧೂರಿಯಾಗಿ ಆಚರಣೆ ಮಾಡಿದರು. ಯಾರೋ ಒಂದಿಷ್ಟು ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕಲ್ಲು ತೂರಾಟ ವೇಳೆ ಸುಮಾರು 12 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲವನ್ನೂ ಈಗಲೇ ಹೇಳಲಾಗಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.