ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ ಆರ್ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತನ್ನ ಪ್ರಮುಖ ರೆಪೋ ದರವನ್ನು ಸತತ ನಾಲ್ಕನೇ ಬಾರಿಗೆ ಬದಲಾಯಿಸದೆ ಇರಲು ತೀರ್ಮಾನಿಸಿದ್ದು ಈ ಮೂಲಕ ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತು ಮಾತನಾಡಿರುವ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್,   ಸದ್ಯ ರೆಪೋ ದರ 6.5% ರಷ್ಟು ಇದ್ದು, ಇದನ್ನು ಬದಲಿಸದೆ ಇರಲು ನಿರ್ಧರಿಸಿದೆ. ಕೇಂದ್ರ ಬ್ಯಾಂಕ್ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರೆಪೋ ದರವು RBI ಇತರ ಬ್ಯಾಂಕ್ಗಳಿಗೆ ಸಾಲ ನೀಡುವ ಬಡ್ಡಿ ದರವಾಗಿದೆ. ಇನ್ನು, “ಭಾರತವು ವಿಶ್ವದ ಹೊಸ ಬೆಳವಣಿಗೆಯ ಎಂಜಿನ್ ಆಗಲು ಸಜ್ಜಾಗಿದೆ” ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಇದರರ್ಥ ಸಾಲದ ಬಡ್ಡಿದರಗಳು ಸಹ ಬದಲಾಗದೆ ಉಳಿಯುವ ಸಾಧ್ಯತೆಯಿದೆ. ನಾವು ಹಣದುಬ್ಬರವನ್ನು ಸುಸ್ಥಿರ ಬೆಳವಣಿಗೆಗೆ ಪ್ರಮುಖ ಅಪಾಯವೆಂದು ಗುರುತಿಸಿದ್ದೇವೆ ಎಂದೂ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. “ಒಟ್ಟಾರೆ ಹಣದುಬ್ಬರ ಮುನ್ನೋಟವು ಕೆಲವು ಪ್ರಮುಖ ಬೆಳೆಗಳಾದ ಬೇಳೆಕಾಳುಗಳು ಮತ್ತು ಎಣ್ಣೆ ಬೀಜಗಳ ಖಾರಿಫ್ ಬಿತ್ತನೆಯ ಕುಸಿತದಿಂದ ಹಾಗೂ ಕಡಿಮೆ ಜಲಾಶಯದ ಮಟ್ಟಗಳು ಮತ್ತು ಜಾಗತಿಕ ಆಹಾರ ಹಾಗೂ ಇಂಧನ ಬೆಲೆಗಳಲ್ಲಿನ ಚಂಚಲತೆಯಿಂದ ಅನಿಶ್ಚಿತತೆ ಉಂಟಾಗಿದೆ ಎಂದೂ ಶಕ್ತಿಕಾಂತ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು, ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು 5.4% ಇರಲಿದೆ ಮತ್ತು ಮುಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಈ ಪ್ರಮಾಣವು 5.2% ಕ್ಕೆ ಇಳಿಯಬಹುದು ಎಂದೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರೀಕ್ಷಿಸುತ್ತದೆ. ತರಕಾರಿ ಬೆಲೆ ಇಳಿಕೆ ಮತ್ತು ಅಡುಗೆ ಅನಿಲ ಸಿಲಿಂಡರ್ ದರ ಕಡಿತದಿಂದ ಹಣದುಬ್ಬರ ತಗ್ಗಿಸಲಿದೆ ಎಂದೂ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

 

Related posts

ತಮಿಳು ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಆಗ್ರಹ.

ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರರನ್ನ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮನವಿ

ನ.1ರಂದು ಕರ್ನಾಟಕ ಸಂಭ್ರಮ-50: ಕೆಂಪು ಹಳದಿ ಬಣ್ಣದ ರಂಗೋಲಿ ಬಿಡಿಸಿ, ಗಾಳಿಪಟ ಹಾರಿಸಿ…