ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಸಹಾ ಮಕ್ಕಳ ದಸರಾ ಸಮಿತಿ ವತಿಯಿಂದ ಮಕ್ಕಳ ವಿವಿಧ ಹಂತದಲ್ಲಿ ವಿವಿಧ ಸ್ಪರ್ಧೆಗಳಾದ ಚಿತ್ರಕಲೆ, ಪ್ರಬಂಧ, ಕ್ಲೇ ಮಾಡ್ಲಿಂಗ್, ಛದ್ಮವೇಶ, ಮೆಮೋರಿ ಟೆಸ್ಟ್, ಹಾಗೂ ಹಲವು ಕ್ರೀಡೆಗಳ ಸ್ಪರ್ಧೆಗಳನ್ನ್ನು ಹಮ್ಮಿಕೊಂಡಿದೆ.
ಸೆ. 9 ರಂದು ಬೆಳಿಗ್ಗೆ 10.30ಕ್ಕೆ ನೆಹರು ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದ್ದು, ಜಿಲ್ಲಾ ಮಂತ್ರಿ.ಎಸ್. ಮಧುಬಂಗಾರಪ್ಪ ಹಾಗೂ ಸಂಸದ.ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮಹಾನಗರಪಾಲಿಕೆ ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರನಾಯಕ್, ಪಾಲಿಕೆ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ನಗರದ ಎಲ್ಲಾ ಜನತೆ ಆಗಮಿಸಬೇಕೆಂದು ಮಕ್ಕಳ ದಸರಾ ಸಮಿತಿ ಅಧ್ಯಕ್ಷೆ ರೇಖಾ ರಂಗನಾಥ್ ಕೋರಿದ್ದಾರೆ.