ಶಿವಮೊಗ್ಗ : ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಕಾಲಭೈರವೇಶ್ವರ ದೇವಾಲಯ ಆವರಣದಲ್ಲಿ ಅ.22 ರಂದು ಭಾನುವಾರ ನಡೆಯುವ ದಸರಾ ಕಾರ್ಯಕ್ರಮದಲ್ಲಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ ಐದು ಮಂದಿ, ಗರಿಷ್ಠ ಎಂಟು ಮಂದಿ ಇರಬಹುದು. ಪ್ರತಿ ವರ್ಷದಂತೆ ಈ ವರ್ಷವೂ ಏರ್ಪಡಿಸಲಾಗಿದೆ. ಆಸಕ್ತಿಯಿರುವ ತಂಡಗಳು ಅ.15 ರ ಒಳಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಅಧ್ಯಕ್ಷರಾದ ಡಿ.ಮಂಜುನಾಥ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
previous post