ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಶಾಲೆಗಳಲ್ಲೇ ಅಂಕಪಟ್ಟಿ’ ತಿದ್ದುಪಡಿಗೆ ಅವಕಾಶ.

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ  ಸಿಹಿಸುದ್ದಿ ಸಿಕ್ಕಿದ್ದು ಶಾಲೆಗಳಲ್ಲೇ  ಅಂಕಪಟ್ಟಿ’ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಶಿಕ್ಷಣ ಇಲಾಖೆಯಿಂದ  ವಿದ್ಯಾರ್ಥಿ ಸ್ನೇಹಿ ಕ್ರಮಕ್ಕೆ ಒತ್ತು ನೀಡುವ ಉದ್ದೇಶದಿಂದ ಎಸ್ ಎಸ್ ಎಲ್ ಸಿ ಅಂಕಪಟ್ಟಿ ತಿದ್ದುಪಡಿಗೆ ಶಾಲೆಯಲ್ಲೇ ಅವಕಾಶ ನೀಡಲಾಗಿದೆ. ಈ ಮೂಲಕ ಬೆಂಗಳೂರು ಕೇಂದ್ರ ಕಚೇರಿಗೆ ವಿದ್ಯಾರ್ಥಿಗಳು ಅಲೆಯೋ ಅಲೆದಾಟವನ್ನು ತಪ್ಪಿಸಿದೆ.

ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ತಿದ್ದುಪಡಿ ಪ್ರಸ್ತಾವನೆ ಸಲ್ಲಿಸಲು ಲಾಗಿನ್ ಸೌಲಭ್ಯವನ್ನು ನೀಡಲಾಗಿದೆ. ಈ ಲಾಗಿನ್ ಅಡಿಯಲ್ಲಿ ಮುಖ್ಯ ಶಿಕ್ಷಕರು ಲಾಗಿನ್ ಆಗಿ, ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಅಂಕಪಟ್ಟಿಯಲ್ಲಿನ ಹೆಸರು, ತಂದೆ-ತಾಯಿಗಳ ಹೆಸರು, ಜನ್ಮ ದಿನಾಂಕ ಸೇರಿದಂತೆ ಇತರೆ ತಪ್ಪುಗಳಿದ್ದಲ್ಲೇ ಸರಿ ಮಾಡೋದಕ್ಕೆ ಅವಕಾಶ ನೀಡಲಾಗಿದೆ.

ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಸಲ್ಲಿಸೋ ಎಸ್ ಎಸ್ ಎಲ್ ಸಿ ಅಂಕಪಟ್ಟಿ ತಿದ್ದುಪಡಿಯ ಮಾಹಿತಿಯನ್ನು ಪರಿಶೀಲನೆ ನಡೆಸಲಿರುವಂತ ಪರೀಕ್ಷಾ ಮಂಡಳಿಯು, ಅವುಗಳನ್ನು ಸರಿ ಪಡಿಸಲಿದೆ. ಆ ಬಳಿಕ ಸರಿ ಪಡಿಸಲಾದಂತ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಶಾಲೆಗಳಿಗೆ ಕಳುಹಿಸಿ ಕೊಟ್ಟು, ವಿದ್ಯಾರ್ಥಿಗಳಿಗೆ ಬೆಂಗಳೂರಿಗೆ ಅಲೆದಾಡದಂತೆ ತಲುಪಿಸೋ ಕ್ರಮ ವಹಿಸಲಾಗಿದೆ.

ವರ್ಷಕ್ಕೆ ಮೂರು ಬಾರಿ ವಾರ್ಷಿಕ ಪರೀಕ್ಷೆಯಂತ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಈ ಕ್ರಮ ಕೈಗೊಂಡಿತ್ತು. ಇದೀಗ ಮತ್ತೊಂದು ಕ್ರಮವಾಗಿ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಶಾಲೆಗಳಲ್ಲಿಯೇ ತಿದ್ದುಪಡಿ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಿ, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.

 

Related posts

ರೈತರ ಸಾಲ ವಸೂಲಾತಿಗಾಗಿ ಕೆನರಾ ಬ್ಯಾಂಕ್‍ ದೌರ್ಜನ್ಯ ಆರೋಪ : ರಾಜ್ಯ ರೈತ ಸಂಘ ,ಹಸಿರು ಸೇನೆ ಪ್ರತಿಭಟನೆ.

ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವುದು ಮುಖ್ಯ-ಜಿ.ವಿಜಯ್‌ಕುಮಾರ್

ಕಾಂಗ್ರೆಸ್ ಪರ ಅಲೆ: ಕರ್ನಾಟಕದಂತೆಯೇ ಪಂಚ ರಾಜ್ಯ ಚುನಾವಣೆಯಲ್ಲೂ ಬಿಜೆಪಿಗೆ ಸಂಕಷ್ಟ…?