ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ತಾಲೂಕು ಗ್ರಾಮಾಂತರ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಖಾನ್ ನಿಧನ.

ಭದ್ರಾವತಿ:  ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ತಾಲೂಕು ಗ್ರಾಮಾಂತರ ಅಧ್ಯಕ್ಷ ಬಾಬಳ್ಳಿ ನಿವಾಸಿ ಇಸ್ಮಾಯಿಲ್ ಖಾನ್(೭೩) ನಿಧನ ಹೊಂದಿದರು.

ಪುತ್ರಿ ಹಾಗು ಮೂವರು ಪುತ್ರರು ಇದ್ದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಹಾಗು ಗ್ರಾಮ ಪಂಚಾಯತ್ ಸದಸ್ಯರಾಗಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಡಿಸಿಸಿ) ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇವರ ನಿಧನಕ್ಕೆ ಇವರ ಸಹೋದರ, ಉಪನ್ಯಾಸಕ ಡಾ.ಬಿ.ಎಂ ನಾಸಿರ್‌ಖಾನ್, ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

Related posts

ಮೌಲ್ಯಾಂಕನ ವಿಶ್ಲೇಷಣೆ ಬಿಡುಗಡೆ: ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್..!

ಶಾಲಾ ಮಕ್ಕಳನ್ನು ಮ್ಯಾನೇಜ್ ಮೆಂಟ್ ಸೇವೆಗಳಿಗೆ ಬಳಸಿದ್ರೆ ಕಠಿಣ ಕ್ರಮ- ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ.

ರಾಜ್ಯದಲ್ಲಿ ಶೇ 28ರಷ್ಟು ಮಳೆ ಕೊರತೆ: 4800 ಕೋಟಿ ರೂ. ಪರಿಹಾರಕ್ಕೆ ಮನವಿ- ಕಂದಾಯ ಸಚಿವ ಕೃಷ್ಣಭೈರೇಗೌಡ.