ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ನಲ್ಲಿ ಯುವ ದಸರಾ ಅಂಗವಾಗಿ ಏರ್ಪಡಿಸಿದ್ದ ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಚಂದನ್ ಶೆಟ್ಟಿ, ಅನನ್ಯ ಭಟ್, ಅಜೇಯ ವಾರಿಯರ್, ಐಶ್ವರ್ಯ, ಭಾಗವಹಿಸಿ ಸಾವಿರಾರು ಪ್ರೇಕ್ಷಕರನ್ನು ರಂಜಿಸಿದರು.
ಕಾರ್ಯಕ್ರಮದಲ್ಲಿ ಬಸವ ಕೇಂದ್ರದ ಶ್ರೀಗಳು ಭಾಗವಹಿಸಿ ಆಶೀರ್ವಚನ ನೀಡಿದರು.
ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಆಯಕ್ತ ಮಾಯಣ್ಣ ಗೌಡ, ಯುವ ದಸರಾ ಸಮಿತಿ ಅಧ್ಯಕ್ಷ ನಾಗರಾಜ ಕಂಕಾರಿ, ಆಡಳಿತ ಪಕ್ಷದ ನಾಯಕ ಎಸ್.ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಎಸ್.ಎನ್. ಮಂಜುನಾಥ್, ಅನಿತಾ ರವಿಶಂಕರ್, ಯು.ಹೆಚ್. ವಿಶ್ವನಾಥ್, ಎಲ್ಲಾ ಸ್ಥಾಯಿ ಸಮಿತಿ ಅಧ್ಯಕ್ಷರು, ಪಾಲಿಕೆ ಅಧಿಕಾರಿಗಳು ಭಾಗವಹಿಸಿದ್ದರು.