ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಅಗ್ನಿ ಅವಘಡ : ಬೆಂಕಿ ಕೆನ್ನಾಲಿಗೆ 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲಾಗಿವೆ.

ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 10ಕ್ಕೂ ಹೆಚ್ಚು ಬಸ್ ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮದಳ ವಾಹನಗಳು ಆಗಮಿಸಿ , ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ ​ಗೆ ಬೆಂಕಿ ಹೊತ್ತಿಕೊಂಡಿದೆ. ವಿವಿಧ ಸಂಸ್ಥೆಗಳಿಗೆ ಸೇರಿದ ಬಸ್ ಗಳಾಗಿದ್ದು, ರಿಪೇರಿಗಾಗಿ  ತಂದು ಪಾರ್ಕಿಂಗ್ ಲಾಟ್ ನಲ್ಲಿ ನಿಲ್ಲಿಸಲಾಗಿತ್ತು.

 

 

Related posts

ಹೆಂಡತಿಗೆ ಹುಷಾರಿಲ್ಲ ಎಂದು ಕಾರು ಪಡೆದು ಸ್ನೇಹಿತನಿಗೆ ಮೋಸ ಮಾಡಿದ ಆರೋಪಿ ಅಂದರ್.

ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಸೇರಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ರಮೇಶ್ ಶೆಟ್ಟಿ ….

ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ: ಐವರು ಸಾವು.