ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ನವೆಂಬರ್ , ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ  ಸಲ್ಲಿಕೆ: ವರದಿ ಸ್ವೀಕಾರಕ್ಕೆ ಬದ್ಧ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ  ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ  ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.

ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ

ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ, ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Related posts

ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಆರೋಪಿ ಅಂದರ್.

ಮಹಿಳಾ ಮೀಸಲಾತಿ ಲೋಕಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವುದು ಸ್ವಾಗತಾರ್ಹ- ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಕುಮಾರಿ

ಕತ್ತಲೆಯಲ್ಲಿ ಮೊಬೈಲ್ ಫೋನ್ ನೋಡೋ ಅಭ್ಯಾಸವಿದ್ರೆ ಎಚ್ಚರ: ಬ್ರೈನ್ ಟ್ಯೂಮರ್ ಬರುತ್ತೆ ಹುಷಾರ್.