ಶಿಕಾರಿಪುರ: ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಸೂರು ಗ್ರಾಮದ ಕೆಂಪಳ್ಳಿ ಗಂಗಣ್ಣ ಅವರನ್ನು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಶಿಕಾರಿಪುರ ಮಂಡಲ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಶಿಕಾರಿಪುರ ನಗರ ಅಧ್ಯಕ್ಷರಾದ ಮೋಹನ್ ಹಾಗೂ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.