ಬೆಂಗಳೂರು :ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ.
7 ನೇ ವೇತನದ ಆಯೋಗದ ಗಡುವನ್ನ ಮತ್ತೆ 6 ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಈ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಸರ್ಕಾರಿ ನೌಕರರಿಗೆ ಕಹಿಸುದ್ದಿ ನೀಡಿದೆ.
ಸರ್ಕಾರಿ ನೌಕರರಿಗೆ ಸದ್ಯಕ್ಕೆ ವೇತನ ಹೆಚ್ಚಳದ ಭಾಗ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರವು 7 ನೇ ವೇತನ ಆಯೋಗದ ಗಡುವು ಮತ್ತೆ 6 ತಿಂಗಳು ವಿಸ್ತರಿಸಿದೆ. ವೇತನ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ನೌಕರರಿಗೆ ರಾಜ್ಯ ಸರ್ಕಾರದ ನಿಲುವು ನಿರಾಸೆ ಮೂಡಿಸಿದೆ.
ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಬಿಜೆಪಿ ಸರ್ಕಾರವು 2022 ರ ನವೆಂಬರ್ 19 ರಂದು ಒಂದು ಆಯೋಗವನ್ನು ರಚನೆ ಮಾಡಿತ್ತು. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಈ ಆಯೋಗ ರಚನೆಯಾಗಿತ್ತು. 6 ತಿಂಗಳಲ್ಲಿ ವರದಿ ನೀಡುವಂತೆ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ನವೆಂಬರ್ 19 ಕ್ಕೆ ಆಯೋಗದ ಅವಧಿ ಅಂತ್ಯ ವಾಗಲಿದೆ. ಆದರೆ ಇದರ ಮಧ್ಯೆ ಈ ಅವಧಿಯನ್ನು ಮತ್ತೆ 6 ತಿಂಗಳು ಕಾಲ ಸರ್ಕಾರ ಹೆಚ್ಚು ಮಾಡಿದೆ. ಹೀಗಾಗಿ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ.