ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕಷ್ಟಗಳನ್ನು ಅರಗಿಸಿಕೊಂಡು ಪರಿಪಕ್ವವಾದವರು ಆರ್.ಎಂ ಮಂಜುನಾಥ ಗೌಡರು-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನುಡಿ

ಶಿವಮೊಗ್ಗ: ಕಷ್ಟಗಳನ್ನು ಅರಗಿಸಿಕೊಂಡು ಪರಿಪಕ್ವವಾದವರು ಆರ್.ಎಂ ಮಂಜುನಾಥ ಗೌಡರು ಎಂದು ಮಾಜಿ ಸಂಸದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಅವರು ಇಂದು ತೀರ್ಥಹಳ್ಳಿಯಲ್ಲಿ ಸಹಕಾರಿ ವೇದಿಕೆ ವತಿಯಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಎಂ. ಮಂಜುನಾಥ ಗೌಡರಿಗೆ ಹಮ್ಮಿಕೊಳ್ಳಲಾಗಿದ್ದ ತೌರೂರ ಸಂಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಆರ್.ಎಂ. ಮಂಜುನಾಥ ಗೌಡರು ಒಬ್ಬ ಧೀಮಂತ ನಾಯಕರು. ಸಹಕಾರ ಕ್ಷೇತ್ರದ ಧ್ರುವತಾರೆಯಾಗಿದ್ದವರು. ಇನ್ನೇನು ಸಹಕಾರ ಕ್ಷೇತ್ರದಲ್ಲಿ ಅವರ ಅಧ್ಯಾಯ ಮುಗಿದೇ ಹೋಯಿತು ಎನ್ನುವ ಹಂತದಿAದ ಮೇಲೆ ಎದ್ದು ಬಂದವರು. ಸವಾಲುಗಳನ್ನು ಸ್ವೀಕರಿಸಿದವರು. ಕಷ್ಟಗಳನ್ನು ಅರಗಿಸಿಕೊಂಡು ಸಹಕಾರ ಕ್ಷೇತ್ರದಲ್ಲಿ ಬೆಳಕು ಮೂಡಿಸಿದವರು. ತೀರ್ಥಹಳ್ಳಿ ಹೇಳಿಕೇಳಿ ಬುದ್ಧಿವಂತರ ರಾಜಕೀಯ ಕ್ಷೇತ್ರ. ಅಂತಹ ಕ್ಷೇತ್ರದಲ್ಲಿ ವರ್ಣರಂಜಿತ ರಾಜಕಾರಣಿಯಾಗಿ ಕಾಣಿಸಿಕೊಂಡವರು ಎಂದರು.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಆರ್.ಎಂ. ಮಂಜುನಾಥ ಗೌಡರನ್ನು ಸಹಕಾರ ಕ್ಷೇತ್ರದಿಂದಲೇ ಮುಗಿಸಿಬಿಡಬೇಕು ಎಂಬ ಹುನ್ನಾರಗಳೆಲ್ಲ ಈಗ ಮುಗಿದುಹೋಗಿವೆ. ಅವರು ಮತ್ತಷ್ಟು ಗಟ್ಟಿಯಾಗಿದ್ದಾರೆ. ಸಹಕಾರ ಕ್ಷೇತ್ರವನ್ನು ದಶಕಗಳ ಕಾಲ ಕಟ್ಟಿ ಬೆಳೆಸಿ ರೈತರ, ಬಡವರ ಪರವಾಗಿ ನಿಂತವರು. ಖಾಸಗಿ ಸಂಸ್ಥೆಗಳ ಕಪಿಮುಷ್ಟಿಗೆ ಸಿಲುಕಿ ನಲುಗುತ್ತಿದ್ದ ರೈತರನ್ನು ಸಹಕಾರ ಕ್ಷೇತ್ರದ ಮೂಲಕ ಉಳಿಸಿಕೊಂಡವರು. ಅವರನ್ನು ಸಹಕಾರ ಕ್ಷೇತ್ರದಿಂದ ಓಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಅವರಿಗೆ ತವರೂರಲ್ಲಿ ಸನ್ಮಾನಿಸುತ್ತಿರುವುದು ಅತ್ಯಂತ ಖುಷಿ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಆರ್.ಎಂ. ಮಂಜುನಾಥ ಗೌಡ ಅವರನ್ನು ಸನ್ಮಾನಿಸಲಾಯಿತು.
ಮಾಜಿಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಹಿರಿಯ ಸಹಕಾರಿ ವಿಜಯದೇವ್, ತಾ.ಪಂ. ಅಧ್ಯಕ್ಷೆ ಗೀತಾ, ಕಲಗೋಡು ರತ್ನಾಕರ್, ಶ್ರೀಪಾದ್ ಹೆಗಡೆ, ನಾರಾಯಣ ರಾವ್, ಷಡಾಕ್ಷರಿ, ವೈ.ಹೆಚ್. ನಾಗರಾಜ್, ಶಂಕರಘಟ್ಟ ರಮೇಶ್ ಶೆಟ್ಟಿ, ಮುಡುಬ ರಾಘವೇಂದ್ರ, ಜೆ ಪಿ ಯೋಗೀಶ್,   ದುಗ್ಗಪ್ಪ ಗೌಡ, ಸುದೀರ್, ರಾಜಣ್ಣ ರೆಡ್ಡಿ ಸೇರಿದಂತೆ ಹಲವರಿದ್ದರು.

Related posts

ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮೀ, ಡಿಸೆಂಬರ್ ನಂತರ ಯುವ ನಿಧಿ ಯೋಜನೆ ಜಾರಿ..

ರಾಜ್ಯದಲ್ಲಿ 3ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲು ಕ್ರಮ-ಸಚಿವ ಮಧು ಬಂಗಾರಪ್ಪ

900 ಹೆಣ್ಣು ಭ್ರೂಣಗಳ ಹತ್ಯೆ: ಇಬ್ಬರು ವೈದ್ಯರು ಸೇರಿ 9 ಮಂದಿ ಅಂದರ್.