ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ.

ಶಿವಮೊಗ್ಗ: ರಾಜ್ಯ ರಾಜಕೀಯ ಕ್ಷೇತ್ರದ ಹಿರಿಯರಾದ ಡಿ.ಬಿ. ಚಂದ್ರೇಗೌಡ ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರದ ಎಲ್ಲ ಪಕ್ಷದ ನಾಯಕರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದ ಡಿ.ಬಿ. ಚಂದ್ರೇಗೌಡರು ರಾಜ್ಯ ಕಂಡ ಬಲು ಅಪರೂಪದ ಸಜ್ಜನ ರಾಜಕಾರಣಿಯಾಗಿ ಮೂರು ಬಾರಿ ಶಾಸಕರಾಗಿ, ಒಂದು ಬಾರಿ ರಾಜ್ಯ ವಿಧಾನಪರಿಷತ್ ಶಾಸಕರಾಗಿ ಹಾಗೂ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಮತ್ತು ಒಂದು ಬಾರಿ ರಾಜ್ಯಸಭಾ ಸದಸ್ಯರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಸಾಮಾನ್ಯರನ್ನು ಪ್ರತಿನಿಧಿಸುವ ನಾಲ್ಕು ಮನೆಗಳನ್ನು ಪ್ರವೇಶಿಸಿದ ದೇಶದ ಮೊದಲ ರಾಜಕಾರಣಿ ಯಾಗಿ ನಾಡಿಗೆ ತಮ್ಮದೇ ಆದ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.
ಇವರೊಂದಿಗೆ ಮೊಟ್ಟ ಮೊದಲ ಬಾರಿಗೆ ನಾನು ಲೋಕಸಭೆಗೆ ಪ್ರವೇಶ ಮಾಡಿದ ಸಂದರ್ಭದಲ್ಲಿ ಡಿ.ಬಿ. ಚಂದ್ರೇಗೌಡ ಅವರು ಸದಸ್ಯರಾಗಿದ್ದರು. ಇವರ ಅನುಭವ, ಅವರಿಂದ ಪಡೆದುಕೊಂಡ ಸಲಹೆ ನನಗೆ ರಾಜಕೀಯ ಮತ್ತು ಸಾಮಾಜಿಕವಾಗಿ ಸಾಕಷ್ಟು ಅನುಕೂಲವಾಗಿದೆ ಎಂದರೆ ತಪ್ಪಾಗಲಾರದು.
ಆತ್ಮವಿಶ್ವಾಸ ಹಾಗೂ ಸ್ಥಿರತೆಯ ಪ್ರತೀಕದಂತಿದ್ದ ಗೌಡರ ವ್ಯಕ್ತಿತ್ವ ನಿಜಕ್ಕೂ ಅನುಕರಣೀಯ. ಇವರ ಆತ್ಮಕ್ಕೆ ಸದ್ಗತಿ ಸಿಗಲಿ. ಕುಟುಂಬಸ್ಥರಿಗೆ, ಆತ್ಮೀಯರಿಗೆ, ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಅಗಲಿದ ಪುತ್ರನ ನೆನಪಲ್ಲಿ 500ಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಮುಚ್ಚಿದ ತಂದೆ!

ಸರ್ಕಾರದಿಂದ ಗ್ಯಾರಂಟಿ ಜಾರಿ: ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ-ಸಚಿವ ಮಧು ಬಂಗಾರಪ್ಪ

ಇಂದು-ನಾಳೆ ‘ಇಂಡಿಯಾ’ ಮೈತ್ರಿಕೂಟದ ಮೂರನೇ ಸಭೆ.