ಬೆಂಗಳೂರು,: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗೆ ಹೈಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಮುರುಘಾಶ್ರೀಗೆ ಮೊದಲ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು . 2ನೇ ಪ್ರಕರಣದಲ್ಲಿ ಜಾಮೀನು ಸಿಕ್ಕಿಲ್ಲ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯವಿಲ್ಲ.
ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್7 ಷರತ್ತುಗಳನ್ನ ವಿಧಿಸಿದೆ. ಚಿತ್ರದುರ್ಗಕ್ಕೆ ಪ್ರವೇಶಿಸುವಂತಿಲ್ಲ. ಕೋರ್ಟ್ ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಹಬೇಕು. ಪಾಸ್ ಪೋರ್ಟ್ ವಶಕ್ಕೆ ನೀಡಬೇಕು ಎಂದು ಷರತ್ತು ಹಾಕಿದೆ.