ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆಶಿ ಸಿಎಂ ಮಾಡಿದ್ರೆ ವಾಪಸ್ ಬರ್ತೀವಿ ಅಂದಿದ್ರು: ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು : ಮೈತ್ರಿ ಸರ್ಕಾರದ  ವೇಳೆ ನಡೆದ  ರಹಸ್ಯವೊಂದನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ.

ಹೌದು ಅಂದು ಮೈತ್ರಿ  ಸರ್ಕಾರ ಪತನದ ವೇಳೆ ಮುಂಬೈಗೆ ಹೋಗಿದ್ದ ಶಾಸಕರು ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡಿ ವಾಪಸ್ ಬರ್ತೀವಿ ಎಂದಿದ್ದರು. ಆದರೆ ಈ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಬಾಯಿ ಬಿಡಲಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಅಂದು  ನನ್ನನ್ನು ಸಿಎಂ ಮಾಡಿ ಅಂದಾಗ ಹೆಚ್ ಡಿ ಕುಮಾರಸ್ವಾಮಿ ಒಪ್ಪಿರಲಿಲ್ಲ.    ಕುಮಾರಸ್ವಾಮಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ. 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜೊತೆಗೆ ಅವರು ನೆಂಟಸ್ಥನ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎನ್ನುವ ಹೆಚ್ಡಿಕೆ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಎನ್ನುತ್ತಾರೆ, ಅವರ ಮಾತು ಕೇಳಲು ನಾವೇನು ದಡ್ಡರೇ? ಎಂದು ಎಂದು ಡಿಸಿಎಂ ಡಿಕೆಶಿ ಹೇಳಿದರು.

 

Related posts

ಕಳೆದ 3 ದಶಕಗಳಲ್ಲಿ ಶೇ 60ರಷ್ಟು ಪಕ್ಷಿ ಪ್ರಭೇದಗಳ ಕುಸಿತ.

ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಬಿಗುವಿನ ವಾತಾವರಣ: ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ.

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ  ದಾಳಿ : ದಾಖಲೆ ಪರಿಶೀಲನೆ.