ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿವೈ ವಿಜಯೇಂದ್ರರನ್ನ ಅಳೆದು ತೂಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ- ಅರವಿಂದ ಲಿಂಬಾವಳಿ.

ಬೆಳಗಾವಿ:   ಬಿ.ವೈ.ವಿಜಯೇಂದ್ರ ಅವರನ್ನು ಅಳೆದು, ತೂಗಿ  ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿ ಮಾಜಿ ಸಚಿವ ಅರವಿಂದ ಲಿಂಬಾವಳಿ,  ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ . ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ  ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಈ ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ  ಹೆಚ್ಚು ಸ್ಥಾನ ಗೆಲ್ಲಿಸುತ್ತಿರಬಹುದು.

ಅದಕ್ಕಾಗಿ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇಮಕ ಮಾಡಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.

Related posts

ಬರ, ಕಾವೇರಿ ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ.

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಮುಖ್ಯಮಂತ್ರಿ ಸಿದ್ದರಾಮಯ್ಯ 

ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ತಾಲೂಕು ಗ್ರಾಮಾಂತರ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಖಾನ್ ನಿಧನ.