ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

 ನ.27 ರಂದು ಶಿರಾಳಕೊಪ್ಪ ಬಸವೇಶ್ವರ ಸಹಕಾರ ಬ್ಯಾಂಕ್ ನ 111ನೇ ವಾರ್ಷಿಕೋತ್ಸವ

ಶಿರಾಳಕೊಪ್ಪ: ಬರುವ ನ.27 ಸೋಮವಾರದಂದು  (27. 11. 2023)  ಬೆಳಿಗ್ಗೆ 10.00 ಗಂಟೆಗೆ ಶಿರಾಳಕೊಪ್ಪದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾದ ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ ನ 111 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಬ್ಯಾಂಕಿನ 4000ಕ್ಕೂ ಹೆಚ್ಚು ಸದಸ್ಯರು ಹಾಗೂ ಬ್ಯಾಂಕಿನ ಗ್ರಾಹಕರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶಿರಾಳಕೊಪ್ಪದ ಮ. ನಿ. ಪ್ರ ಸಿದ್ಧೇಶ್ವರ ಸ್ವಾಮೀಜಿಯವರು ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ, ಸಂಸದ ಬಿ ವೈ ರಾಘವೇಂದ್ರ, ಸಹಕಾರ ಸಚಿವ  ಕೆ.ಎನ್ ರಾಜಣ್ಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಮಧು ಬಂಗಾರಪ್ಪ,  ಶಿಕಾರಿಪುರ ಶಾಸಕ  ಬಿ ವೈ ವಿಜಯೇಂದ್ರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ಬೆಂಗಳೂರು ಇದರ ಅಧ್ಯಕ್ಷರಾದ  ಎಚ್. ಕೆ .ಪಾಟೀಲ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ .ಟಿ .ದೇವೇಗೌಡ,  ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಕೆ ರಾಜೇಂದ್ರ ಸೇರಿದಂತೆ ಹಲವು  ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ  ಕುಪ್ಪೇಲೂರು ವೇದಮೂರ್ತಿ ವಹಿಸಲಿದ್ದಾರೆ.

Related posts

ಕರಾಳ ದಿನ: ಮುಂಬೈ 26 \11 ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ…..

ಚುನಾವಣಾ ಸಮೀಕ್ಷೆ: ಎಬಿಪಿ-ಸಿ ವೋಟರ್ಸ್ ಸರ್ವೇ ಪ್ರಕಾರ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ..

ರಾಜ್ಯದ ಹಲವೆಡೆ ಒಂದು ವಾರ ಮಳೆ- ಹವಮಾನ ಇಲಾಖೆ ಮುನ್ಸೂಚನೆ.