ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪರೀಕ್ಷೆ ಬರೆಯುವಾಗಲೇ ಹೃದಯಾಘಾತ: 9ನೇ ತರಗತಿ ವಿದ್ಯಾರ್ಥಿ ಸಾವು.

ಬಾಗಲಕೋಟೆ:  ಪರೀಕ್ಷೆ ಬರೆಯುವಾಗಲೇ ಎದೆನೋವು ಕಾಣಿಸಿಕೊಂಡು  ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಇನಾಂ ಹಂಚಿನಾಳ ಗ್ರಾಮದ ರಾಹುಲ್ ಮೃತಪಟ್ಟ ವಿದ್ಯಾರ್ಥಿ. ಹುಲ್ಯಾಳ ಗ್ರಾಮದ ಖಾಸಗಿ ಪ್ರೌಢಶಾಲೆಯಲ್ಲಿ ರಾಹುಲ್ 9ನೇ ತರಗತಿ ಓದುತ್ತಿದ್ದ. ರಾಹುಲ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಈ ನಡುವೆ ಇಂದು ಪರೀಕ್ಷೆ ಬರೆಯುವ ವೇಳೆ ರಾಹುಲ್ ಗೆ  ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಶಿಕ್ಷಕರು ಮುಂದಾಗಿದ್ದು ಆದರೆ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿ ರಾಹುಲ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Related posts

ತೀವ್ರಗೊಂಡ ಕಾವೇರಿ ಹೋರಾಟ: ಅಖಂಡ ಕರ್ನಾಟಕ ಬಂದ್: ಬೀದಿಗಳಿದು ಪ್ರತಿಭಟನೆ..

 ಅಗ್ನಿ ಅವಘಡ : ಬೆಂಕಿ ಕೆನ್ನಾಲಿಗೆ 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲು

 ವಿಧಾನಸೌಧ ಮುತ್ತಿಗೆಗೆ ಕರ್ನಾಟಕ ರಕ್ಷಣಾ ವೇದಿಕೆ  ಕಾರ್ಯಕರ್ತರು ಯತ್ನ.