ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್.

ಬೆಂಗಳೂರು :ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ  ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ.

7 ನೇ ವೇತನದ ಆಯೋಗದ ಗಡುವನ್ನ ಮತ್ತೆ 6 ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಈ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಸರ್ಕಾರಿ ನೌಕರರಿಗೆ ಕಹಿಸುದ್ದಿ ನೀಡಿದೆ.

ಸರ್ಕಾರಿ ನೌಕರರಿಗೆ ಸದ್ಯಕ್ಕೆ ವೇತನ ಹೆಚ್ಚಳದ ಭಾಗ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರವು 7 ನೇ ವೇತನ ಆಯೋಗದ ಗಡುವು ಮತ್ತೆ 6 ತಿಂಗಳು ವಿಸ್ತರಿಸಿದೆ. ವೇತನ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ನೌಕರರಿಗೆ ರಾಜ್ಯ ಸರ್ಕಾರದ ನಿಲುವು ನಿರಾಸೆ ಮೂಡಿಸಿದೆ.

ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಬಿಜೆಪಿ ಸರ್ಕಾರವು 2022 ರ ನವೆಂಬರ್ 19 ರಂದು ಒಂದು ಆಯೋಗವನ್ನು ರಚನೆ ಮಾಡಿತ್ತು. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಈ ಆಯೋಗ ರಚನೆಯಾಗಿತ್ತು. 6 ತಿಂಗಳಲ್ಲಿ ವರದಿ ನೀಡುವಂತೆ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ನವೆಂಬರ್ 19 ಕ್ಕೆ ಆಯೋಗದ ಅವಧಿ ಅಂತ್ಯ ವಾಗಲಿದೆ. ಆದರೆ ಇದರ ಮಧ್ಯೆ ಈ ಅವಧಿಯನ್ನು ಮತ್ತೆ 6 ತಿಂಗಳು ಕಾಲ ಸರ್ಕಾರ ಹೆಚ್ಚು ಮಾಡಿದೆ. ಹೀಗಾಗಿ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ.

 

Related posts

ಕಾವೇರಿ ನದಿ ನೀರು ವಿವಾದ ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ಗೊಂದಲಗಳನ್ನು ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕ-ಭವಿಷ್ಯ ನುಡಿದ ಕಾಲಜ್ಞಾನಿ ಕೊಡೇಕಲ್ ಬಸವಣ್ಣ..

ಬೆಂಗಳೂರು ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ  ಗುರುಪುರದ ಬಿ ಜಿ ಎಸ್ ಶಾಲೆಗೆ ಬಂಗಾರದ ಪದಕ