ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭೀಕರ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.

ವಿಜಯನಗರ, : ಕ್ರೂಸರ್ ಮತ್ತು ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ವ್ಯಾಸನಕೇರಿ ಬಳಿ ಈ ಘಟನೆ ನಡೆದಿದೆ. ಕ್ರೂಸರ್ ನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಿಯಮ್ಮನಹಳ್ಳಿಯಿಂದ ಹೊಸಪೇಟೆ ಕಡೆಗೆ ಕ್ರೂಸರ್ ಬರುತ್ತಿತ್ತು. ಈ ವೇಳೆ ಲಾರಿಯ ಆ್ಯಕ್ಸಿಲ್ ಕಟ್ ಆಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯರು ಮತ್ತು ಪೊಲೀಸರು ಮೃತದೇಹಗಳನ್ನ ಹೊರ ತೆಗೆಯುತ್ತಿದ್ದಾರೆ. ಸಾವಿನ  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ  ಇದೆ ಎನ್ನಲಾಗಿದೆ.

Related posts

ಪಟಾಕಿ ದುರಂತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು

ಅ.15ರಿಂದ 24ರ ವರೆಗೆ ನಾಡಹಬ್ಬ ಶಿವಮೊಗ್ಗ ದಸರಾ-2023 ವೈಭವದಿಂದ ಆಚರಣೆ.

ಕಾವೇರಿ ನದಿ ನೀರು ವಿವಾದ: ಕೇಂದ್ರ ಜಲಶಕ್ತಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ.