ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆಕಾಶವಾಣಿ ಭದ್ರಾವತಿಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ.

ಶಿವಮೊಗ್ಗ:  ಆಕಾಶವಾಣಿ ಭದ್ರಾವತಿ  ನವೆಂಬರ್ ತಿಂಗಳ ಪೂರ್ತಿ ಶಿವಮೊಗ್ಗ ದಾವಣಗೆರೆ ಹಾಗು ಚಿಕ್ಕಮಗಳೂರು ಜಿಲ್ಲೆಯ ಹೊರನಾಡ ಕನ್ನಡಿಗರ ಅನಿಸಿಕೆ ಧ್ವನಿಮುದ್ರಿಸಿ ಅವರಿಗಿರುವ ಕನ್ನಡದ ಪ್ರೀತಿ ಕುರಿತಂತೆ ‘ಹೊರನಾಡ ಕನ್ನಡಿಗರ ಕನ್ನಡ ಪ್ರೀತಿ’ ಕಾರ್ಯಕ್ರಮ ಸರಣಿಯನ್ನು ಪ್ರಸಾರಿಸಲಿದೆ.
ಪ್ರತೀದಿನ ಬೆಳಿಗ್ಗೆ 9.35 ನಿಮಿಷಕ್ಕೆ ಪ್ರಸಾರವಾಗುವ ಈ ಸರಣಿಯಲ್ಲಿ ಹೊರನಾಡ ಕನ್ನಡಿಗರು ಭಾಗವಹಿಸಲು ಅವಕಾಶವಿದೆ. ಹೊರನಾಡ ಕನ್ನಡಿಗರು ತಮ್ಮ ಕನ್ನಡ ಪ್ರೀತಿಯನ್ನು ಧ್ವನಿಮುದ್ರಿಸಿ ಚಿiಡಿbಜvಣ@gmಚಿiಟ.ಛಿom ಮೈಲ್ ಗೆ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ ತಿಂಗಳ ಪೂರ್ತಿ ಪ್ರಸಾರವಾಗುವ ಈ ಕಾರ್ಯಕ್ರಮದೊಟ್ಟಿಗೆ ನವೆಂಬರ್ 1 ರಂದು ಬೆಳಿಗ್ಗೆ ಆಕಾಶವಾಣಿ ಹಾಗು ಶಿವಮೊಗ್ಗದ ಕರ್ನಾಟಕ ಸಂಘದ ಸಹಯೋಗದಲ್ಲಿ ಶ್ರೋತೃಗಳ ಸಮ್ಮುಖದಲ್ಲಿ ನಡೆದ “ಕವಿಕಾವ್ಯ ಗಾನಸುಧೆ” ವಿಶೇಷ ಕಾರ್ಯಕ್ರಮ ಬೆಳಿಗ್ಗೆ 9.00ಗಂಟೆಯಿಂದ 11ಗಂಟೆಯವರೆಗೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಹೆಸರಾಂತ 10 ಕವಿಗಳು ತಮ್ಮ ಕವನ ವಾಚನ ಮಾಡುವುದರೊಟ್ಟಿಗೆ ಸಂಗೀತ ಸಂಯೋಜಿಸಿ ಭಾವಗೀತೆಯನ್ನು ಪ್ರಸ್ತುತಪಡಿಸಲಾಗುವುದು. ನಾಡಗೀತೆಯಿಂದ ಆರಂಭವಾಗುವ ಈ ಕಾರ್ಯಕ್ರಮ ಸತತ 2ಗಂಟೆಗಳ ಕಾಲ ಪ್ರಸಾರವಾಗಲಿದೆ.
ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ ಈಒ103.5 ಹಾಗೂ ಒW675ಏhz ನಲ್ಲಿ ಹಾಗೂ ವಿಶ್ವದಾದ್ಯಂತ Prasarbharati ‘newsonair App ನಲ್ಲಿ ಭದ್ರಾವತಿ ಕೇಂದ್ರದ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರAkashavani Bhadravathi youtube channel ನಲ್ಲಿ ಕೇಳಬಹುದು

Related posts

ಸಿಎಂ ಸಿದ್ದರಾಮಯ್ಯರಿಂಧ ಜನತಾದರ್ಶನ ಆರಂಭ: ಸರತಿ ಸಾಲಿನಲ್ಲಿ ಮನವಿ ಸಲ್ಲಿಸುತ್ತಿರುವ ಸಾರ್ವಜನಿಕರು.

ನಾನು‌ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ರೆ ಹೆಚ್.ಡಿ ಕುಮಾರಸ್ವಾಮಿಯವರನ್ನ 6 ವರ್ಷ ಅಮಾನತು ಮಾಡ್ತಿದ್ದೆ- ಎಂಎಲ್ ಸಿ ಹೆಚ್.ವಿಶ್ವನಾಥ್

ಅ.7ರಂದು ಗಾನಸಂಜೆ `ಕಾವ್ಯ ಸಲ್ಲಾಪ’ ಕಾರ್ಯಕ್ರಮ