ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಅಪ್ಪು ಪುಣ್ಯಸ್ಮರಣೆ: ತಮ್ಮನನ್ನು ನೆನದು ಭಾವುಕರಾದ ನಟ ಶಿವಣ್ಣ…

ಬೆಂಗಳೂರು :   ನಟ ಪವರ್ ಸ್ಟಾರ್  ಪುನೀತ್ ರಾಜ್‌ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಆದರ ಇನ್ನೂ  ಅಭಿಮಾನಿಗಳ ಮನದಲ್ಲಿ ಎಂದಂದೂ ಶಾಶ್ವತವಾಗಿ ನೆಲೆಸಿರುತ್ತಾರೆ.

ಇನ್ನು ಪುನೀತ್ ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆ, ಅಪ್ಪು   ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು.  ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದರು. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ.

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾರೆ.          ಇಲ್ಲಿ ಯಾಕೆ ನಾನು ಜಾಸ್ತಿ ಬರಲ್ಲ ಅಂದರೆ, ಅಪ್ಪು ಸಮಾಧಿಗೆ ಬಂದು ಪೂಜೆ ಮಾಡಿ ಅವರನ್ನು ಇಲ್ಲಿಂದ ದೂರ ಕಳಿಸೋಕೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅಪ್ಪು ಯಾವಾಗಲೂ ನಮ್ಮ ಮನಸ್ಸಿನಲ್ಲಿ, ಯೋಚನೆಯಲ್ಲಿರುತ್ತಾರೆ. ಅವರ ಬಗ್ಗೆ ಏನಾದರೂ ಮಾತು ಬಂದೇ ಬರುತ್ತೆ ಮನೆಯಲ್ಲಿ ಆಗ ತುಂಬಾ ಹರ್ಟ್ ಆಗುತ್ತದೆ. ಅಪ್ಪು ಕಣ್ಣು ನಮ್ಮನ್ನ ನೋಡ್ತಿದೆ. ಅದೇ ಸಮಾಧಾನ ಅಷ್ಟೇ ಎಂದು ಶಿವಣ್ಣ ಭಾವುಕರಾದರು.

ನಮ್ಮ ಅಪ್ಪನಿಗಿಂತ ಡಬಲ್ ಹೆಸರು ಪುನೀತ್ ಸಂಪಾದಿಸಿದ್ದಾರೆ. ಅಭಿಮಾನಿಗಳಿಗೆ ಅಪ್ಪು ಮೇಲಿರೋ ಪ್ರೀತಿ, ವಿಶ್ವಾಸ ನೋಡಿದ್ರೆ ತುಂಬಾ ಹೆಮ್ಮೆ ಅನಿಸುತ್ತದೆ. ಅದನ್ನ ನಾವು ಉಳಿಸಿಕೊಂಡು ಹೋಗುತ್ತೇವೆ ಎಂದು ಶಿವರಾಜ್‌ಕುಮಾರ್ ಹೇಳಿದರು.

ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವಣ್ಣ ದಂಪತಿ, ಮೊದಲು ತಂದೆ-ತಾಯಿ ಸಮಾಧಿಗೆ ನಮಸ್ಕರಿಸಿ ಬಳಿಕ ಅಪ್ಪು ಸಮಾಧಿಗೆ ನಮಿಸಿದರು. ಈ ವೇಳೆ, ಶಿವಣ್ಣ ನೋಡಲು ಅಭಿಮಾನಿಗಳ ದಂಡೇ ಭಾಗಿಯಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು.

 

Related posts

ರಕ್ತದಾನ ಮಹತ್ವದ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ-ಡಾ. ಎಂ.ವೆಂಕಟೇಶ್

ವಿದ್ಯಾರ್ಥಿಗಳ ಯೋಚನೆ ಆಲೋಚನೆಗಳು ದೂರದೃಷ್ಟಿಯಿಂದ ಇರಬೇಕು-ಡಾ.ಆನಂದಕುಮಾರ್ ತ್ರಿಪಾಠಿ

ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

TOD News